ಇತ್ತೀಚೆಗೆ ಕ್ವಾರಂಟೈನ್ ನಿಯಮ ಉಲ್ಲಂಘಿಸಿ ತಲೆಮರೆಸಿಕೊಂಡಿದ್ದ ಡ್ರೋನ್ ಪ್ರತಾಪ್ ಬೆಂಗಳೂರು ಪೊಲೀಸರು ಮೈಸೂರಿನಲ್ಲಿ ಬಂಧಿಸಿದ್ದರು. ಸಾಂಸ್ಕೃತಿಕ ನಗರಿ ಮೈಸೂರಿನಿಂದ ಡ್ರೋನ್ ಪ್ರತಾಪ್ನನ್ನು ಬೆಂಗಳೂರಿಗೆ ಕರೆ ತಂದಿದ್ದ ಪೊಲೀಸರು ಸ್ಟಾರ್ ಹೋಟೆಲ್ವೊಂದರಲ್ಲಿ ಕ್ವಾರಂಟೈನ್ ಮಾಡಿದ್ದರು. ಇಂದಿಗೆ ಕ್ವಾರಂಟೈನ್ ಅವಧಿ ಮುಗಿದಿದೆ. ಹೀಗಾಗಿ ಸಿವಿಲ್ ಡಿಫೆನ್ಸ್ ಕಮಾಂಡೆಂಟ್ ಚೇತನ್ ಕುಮಾರ್ ಡ್ರೋನ್ ಪ್ರತಾಪ್ ವಿಚಾರಣೆ ನಡೆಸಿದರು.
ಡ್ರೋನ್ ಪ್ರತಾಪ್ ವಿಚಾರಣೆ ವೇಳೆ ಚೇತನ್ ಕುಮಾರ್ ಕ್ವಾರಂಟೈನ್ ಉಲ್ಲಂಘಿಸಿದ ಬಳಿಕ ಬೆಂಗಳೂರಿನಿಂದ ಮೈಸೂರಿಗೆ ಹೋಗಲು ಯಾರು ಸಹಕರಿಸಿದರು ಎಂಬ ಬಗ್ಗೆ ಮಾಹಿತಿ ಪಡೆದರು. ಈ ವೇಳೆ ಚೇತನ್ ಕುಮಾರ್ ಅವರಿಗೆ ವಿಚಾರಣೆಗೆ ಸರಿಯಾಗಿ ಸಹಕರಿಸದೇ ಡ್ರೋನ್ ಪ್ರತಾಪ್ ಉಡಾಫೆ ತೋರಿದ್ದಾನೆ
ವಿಚಾರಣೆ ಬಳಿಕ ಸುದ್ದಿಗಾರರೊಂದಿಗೆ ಮಾತಾಡಿದ ಸಿವಿಲ್ ಡಿಫೆನ್ಸ್ ಕಮಾಂಡೆಂಟ್ ಚೇತನ್ ಕುಮಾರ್, ಡ್ರೋನ್ ಪ್ರತಾಪ್ ಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘಿಸಿ ಯಾವುದೇ ಟಿವಿ ಕಾರ್ಯಕ್ರಮಕ್ಕೆ ಹೋಗಿದ್ದರು. ಹಾಗಾಗಿ ಇವರನ್ನು ಬಂಧಿಸಿ ಸ್ಟಾರ್ ಹೋಟೆಲ್ವೊಂದರಲ್ಲಿ ಸಾಂಸ್ಥಿಕ ಕ್ವಾರಂಟೈನ್ ಮಾಡಿದ್ದೆವು. ಹೋಟೆಲ್ನಲ್ಲಿ ಕ್ವಾರಂಟೈನ್ ಆದಾಗಲೂ ಇವರು ನಿಯಮ ಉಲ್ಲಂಘನೆ ಮಾಡಿದ್ದಾರೆ. ಆದ್ದರಿಂದ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಿಸಿದ್ದೇವೆ ಎಂದರು.
ಇನ್ನು, ತಾನು ಕ್ವಾರಂಟೈನ್ ಆಗುದ್ದ ಸ್ಟಾರ್ ಹೋಟೆಲ್ಗೆ ತನ್ನ ವಕೀಲರನ್ನು ಕರೆಸಿಕೊಂಡು ಡ್ರೋನ್ ಪ್ರತಾಪ್ 2 ಗಂಟೆಗಳ ಕಾಲ ಚರ್ಚಿಸಿದ್ದಾರೆ. ಈ ಮೂಲಕ ಮತ್ತೊಮ್ಮೆ ಕ್ವಾರಂಟೈನ್ ನಿಮಯ ಉಲ್ಲಂಘಿಸಿದ್ದಾರೆ ಎನ್ನಲಾಗಿದೆ.